ಮಲೆನಾಡು, ಕರಾವಳಿಯಲ್ಲಿ ಮಳೆ!?
– ಹವಾಮಾನ ಇಲಾಖೆ ಎಚ್ಚರಿಕೆ..!
– ಬೆಂಗಳೂರು ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣ
– ಕೊಪ್ಪ ಸೇರಿದಂತೆ ಹಲವೆಡೆ ಮಳೆ!
NAMMUR EXPRESS NEWS
ತೀರ್ಥಹಳ್ಳಿ : ಮಂಗಳವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಆವರಿಸಲಿದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ ಸಾಧ್ಯತೆ ಇದ್ದರೆ, ಉತ್ತರ ಕನ್ನಡದಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಹಾವೇರಿಯಲ್ಲಿ ಅಲ್ಲಲ್ಲಿ ಹಗುರ ಮಳೆ ಇರಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರಲ್ಲೂ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೊಪ್ಪ, ಗಡಿಕಲ್ಲು, ದೇವಂಗಿ ಭಾಗದಲ್ಲಿ ಮಳೆಯಾಗುತ್ತಿದ್ದು ತೀರ್ಥಹಳ್ಳಿಯ ಸುತ್ತಮುತ್ತ ಮೋಡ ಕವಿದ ವಾತಾವರಣವಿದೆ. ಈ ಅಕಾಲಿಕ ಮಳೆಯಿಂದ ಅಡಿಕೆ ಮತ್ತು ಭತ್ತದ ಬೆಳೆಗಾರರಿಗೆ ತೊಂದರೆಯಾಗುತ್ತಿದೆ. ಮಳೆ ಬರುವ ಸಾಧ್ಯತೆ ಹೆಚ್ಚಿದ್ದು ಬೆಳೆಗಾರರು ಎಚ್ಚರವಹಿಸಬೇಕಿದೆ.