ರಾಜ್ಯದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಬೇಸಿಗೆ ರಜೆ.!
– ಮಧ್ಯಾಹ್ನದ ಬಿಸಿಯೂಟ ವಿತರಣೆ
NAMMUR EXPRESS NEWS
ಬೆಂಗಳೂರು: ಪಿ.ಎಂ.ಪೋಷಣ್ ಶಕ್ತಿ ನಿರ್ಮಾಣ್ ಹಾಗೂ ಅಕ್ಷರ ದಾಸೋಹ ಕಾರ್ಯಕ್ರಮದಡಿ 31 ಕಂದಾಯ ಜಿಲ್ಲೆಗಳಲ್ಲಿ ಬರ ಘೋಷಣೆಯ ಹಿನ್ನಲೆಯಲ್ಲಿ ಬರಗಾಲದಲ್ಲಿ ಮಕ್ಕಳಲ್ಲಿನ ಪೌಷ್ಟಿಕಾಂಶ ಕೊರತೆಯಾಗಬಾರದೆಂದು ಏಪ್ರಿಲ್ 11 ರಿಂದ ಮೇ 28 ರ ವರೆಗೆ ಭಾನುವಾರಗಳಂದು ಹೊರತುಪಡಿಸಿ ನಿರಂತರವಾಗಿ 41 ದಿನಗಳ ಕಾಲ ಮಧ್ಯಾಹ್ನದ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಬಿಸಿಯೂಟವನ್ನು ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ 1 ರಿಂದ 10 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಅಂದರೆ ಪ್ರಸ್ತುತ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಒಳಗೊಂಡಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ 12 ರಿಂದ 2 ಗಂಟೆಯ ಅವಧಿಯಲ್ಲಿ ಊಟ ನೀಡಲಾಗುತ್ತದೆ. ಶಾಲೆಗಳ ಬೇಸಿಗೆ ರಜೆ ಏಪ್ರಿಲ್ 11 ರಿಂದ ಆರಂಭವಾಗಲಿದೆ.