ಹೊಸದುರ್ಗದಲ್ಲಿ ನೂತನ ಸಂಸದರಿಗೆ ಅಭಿನಂದನೆಗೆ ಸಜ್ಜು!
– ಬಿಜೆಪಿ ,ಜೆಡಿಎಸ್ ಕಾರ್ಯಕರ್ತರಿಂದ ನೂತನ ಸಂಸದರಿಗೆ ಜೂ. 16ಕ್ಕೆ ಅಭಿನಂದನಾ ಕಾರ್ಯಕ್ರಮ
– ಗೆಲುವಿಗೆ ಕಾರಣರಾದ ಕಾರ್ಯಕರ್ತರಿಗೂ ಅಭಿನಂದನೆ
NAMMUR EXPRESS NEWS
ಹೊಸದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದು ನೂತನವಾಗಿ ಆಯ್ಕೆಯಾಗಿರುವ ಸಂಸದ ಗೋವಿಂದ ಕಾರಜೋಳ ಅವರಿಗೆ ಹೊಸದುರ್ಗ ಕಾರ್ಯಕರ್ತರಿಂದ ಅಭಿನಂದನ ಸಮಾರಂಭವನ್ನು ಜೂ. 16ರ ಭಾನುವಾರದಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದದೆ.
ಹೊಸದುರ್ಗ ತಾಲೂಕಿನ ಎಲ್ಲಾ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ್ ತಿಳಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಮೆಚ್ಚಿ ಹೊಸದುರ್ಗ ಎರಡು ಪಕ್ಷದ ಕಾರ್ಯಕರ್ತರು ಹಗಲಿರುಳೆನ್ನದೆ ಶ್ರಮಿಸಿ 76252 ಮತ ಹಾಕಿ 9687 ಬಹುಮತದೊಂದಿಗೆ ನಮ್ಮ ಕಾರ್ಯಕರ್ತರು ಆಯ್ಕೆ ಮಾಡಿದ್ದಾರೆ. ಇಂತಹ ನಮ್ಮ ಹೆಮ್ಮೆಯ ಸಂಸದರಿಗೆ ಅಭಿನಂದನೆಯನ್ನು ಸಲ್ಲಿಸಲಾಗುವುದು ಎಂದರು.
ಪೂರ್ವಭಾವಿ ಸಭೆಯಲ್ಲಿ ರಾಜ್ಯ ಖನಿಜ ನಿಗಮ ಮಾಜಿ ಅಧ್ಯಕ್ಷ ಎಸ್ ಲಿಂಗಮೂರ್ತಿ, ಬಿಜೆಪಿ ಮುಖಂಡ ಯುವ ಉದ್ಯಮಿ ಸದ್ಗುರು ಪ್ರದೀಪ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ ಎಸ್ ಕಲ್ಮಠ, ಪುರಸಭಾ ಮಾಜಿ ಅಧ್ಯಕ್ಷ ಶ್ರೀನಿವಾಸ್ ಗೂಳಿಹಟ್ಟಿ ಕೃಷ್ಣಮೂರ್ತಿ ಮಾಜಿ ಜಿ ಪಂ ಸದಸ್ಯ ಗುರುಸ್ವಾಮಿ, ಹೆಬ್ಬಳ್ಳಿ ಮಲ್ಲಿಕಾರ್ಜುನ್, ಶಿವು ಮಠ, ವಕೀಲರ ಸಂಘದ ಅಧ್ಯಕ್ಷ ರವಿಕುಮಾರ್, ಮರಿದಿಮ್ಮಪ್ಪ, ತಂಡದ ಕಲ್ಲೇಶ್ , ಜಾನಕಲ್ ತಿಮ್ಮಪ್ಪ, , ಸದಸ್ಯರಾದ ಸರೋಜಮ್ಮ, ಗೀತಾ ಆಸಂದಿ ,ಪಾರ್ವತಮ್ಮ, ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕಾರ್ಯಕರ್ತರಿಗೆ ಅಭಿನಂದನೆ
ಬಸವಣ್ಣನ ನಾಡಿನ ಮುತ್ಸದ್ದಿ ರಾಜಕಾರಣಿ ಗೋವಿಂದ ಕಾರಜೋಳ್ ರವರು ಹೊಸದುರ್ಗದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲು ಆಗಮಿಸುತ್ತಿದ್ದು ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಸಾಮಾಜಿಕ ನ್ಯಾಯದಡಿ ನೂತನ ಸಂಸದರು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಲಿದ್ದು ಜಾತಿ ವರ್ಗ ವರ್ಣ ರಹಿತ ಸಮ ಸಮಾಜದ ನಿರ್ಮಾಣವೇ ನಮ್ಮ ಗುರಿ ಎಂಬ ಸಿದ್ದಾಂತವನ್ನು ಮೈಗೂಡಿಸಿಕೊಂಡಿದ್ದಾರೆ.
ಜಗದೀಶ್ ರಾಮಯ್ಯ,
ಮಂಡಲ ಪ್ರಧಾನ ಕಾರ್ಯದರ್ಶಿ ,
ಹೊಸದುರ್ಗ
.