ಸಿದ್ದರಾಮಯ್ಯ ರಾಜೀನಾಮೆಗೆ ವಿಜಯೇಂದ್ರ ಪಟ್ಟು!
– ವಾಲ್ಮೀಕಿ ಅಭಿವೃದ್ದಿ ನಿಗಮದ ಹಣ ದುರ್ಬಳಕೆ ವಿರುದ್ಧ ಪ್ರತಿಭಟನೆ
– ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಬಿಜೆಪಿ ಹೋರಾಟ
NAMMUR EXPRESS NEWS
ಚಿತ್ರದುರ್ಗ: ಕರ್ನಾಟಕ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಎಂದೆಂದೂ ಕಾಣದಂತಹ ಬ್ರಹ್ಮಾಂಡ ಭ್ರಷ್ಠಾಚಾರದಲ್ಲಿ ಮುಳುಗಿದ್ದು ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಜಿನಾಮೆ ಕೊಡಬೇಕು. ಚಿತ್ರದುರ್ಗದಿಂದ ನಮ್ಮ ಹೋರಾಟ ಪ್ರಾರಂಭವಾಗಿದ್ದು ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಿಡಿ ಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ಭ್ರಷ್ಟಾಚಾರ ಹಗರಣದ ವಿರುದ್ಧ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಮಾಡಿ ನಂತರ ಬಂಧನಕ್ಕೆ ಒಳಗಾಗಿ ಮಾತನಾಡಿದ ಬಿ.ವೈ.ವಿಜಯೇಂದ್ರ ಮಾತನಾಡಿ ಕಾಂಗ್ರೆಸ್ ನ ಐದು ಉಚಿತ ಗ್ಯಾರೆಂಟಿಗಳಿಗೆ ಹಣ ಸಾಕಾಗದ ಕಾರಣ ಕರ್ನಾಟಕ ವಾಲ್ಮೀಕಿ ಅಭಿವೃದ್ದಿ ನಿಗಮದ ಹಣ ಬಳಸಿಕೊಂಡಿದೆ. ಬೇನಾಮಿ ಖಾತೆಗಳನ್ನು ತೆರೆದು 187 ಕೋಟಿ ರೂ.ಗಳನ್ನು ವರ್ಗಾಯಿಸಿ ಅಲ್ಲಿಂದ ರಾಜ್ಯ ಸರ್ಕಾರ ಬೇರೆ ಬೇರೆ ಉದ್ದೇಶಗಳಿಗೆ ಖರ್ಚು ಮಾಡಿ ನೆರೆಯ ಆಂಧ್ರಕ್ಕೆ ಹಣ ಸಾಗಾಟ ಮಾಡಿದ್ದಾರೆ.
ವಾಲ್ಮೀಕಿ ಹೆಸರಿನಲ್ಲಿ ಸ್ಥಾಪಿತವಾದ ಪರಿಶಿಷ್ಟ ಪಂಗಡ ನಿಗಮದ ಈ ಹಣ ಬಾರ್ ಗಳಲ್ಲಿ ಕುಳಿತು ಕುಡಿಯುವವರಿಗೂ ತಲುಪಿದೆ. ಇಂತಹ ಕಡು ಭ್ರಷ್ಟ ಸರ್ಕಾರಕ್ಕೆ ಕಿವಿ ಹಿಂಡಬೇಕಿದೆ ಎಂದರು.
ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ನೂರಾರು ಕೋಟಿ ರೂ.ಗಳನ್ನು ನೀಡಿ ವಾಲ್ಮೀಕಿ ಸಮುದಾಯದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ, ಹಾಸ್ಟೆಲ್ ಹಾಗೂ ವಿದ್ಯಾರ್ಥಿ ವೇತನಕ್ಕೆ ಕೊಡಬೇಕಾಗಿದ್ದ ಹಣ, ವಾಲ್ಮೀಕಿ ಸಮುದಾಯದ ರೈತರ ಗಂಗಾ ಕಲ್ಯಾಣ ಬೋರ್ವೆಲ್ ಕೊರೆಯಲು ಬಳಸಬೇಕಿದ್ದ ಹಣವನ್ನೆಲ್ಲಾ ಈಗಿನ ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ. ಎಸ್.ಐ.ಟಿ. ತನಿಖೆ ನಡೆಸುತ್ತಿದೆಯೇ ವಿನಃ ಸಚಿವ ನಾಗೇಂದ್ರಗೆ ಇದುವರೆವಿಗೂ ಒಂದು ನೋಟಿಸ್ ಕೊಟ್ಟಿಲ್ಲ. ಬೇರೆ ಬೇರೆ ರಾಜ್ಯಗಳಿಗೆ, ರಾಹುಲ್ಗಾಂಧಿಗೆ ಹಣ ಹೋಗಿದೆ. ಕರ್ನಾಟಕವನ್ನು ಎಟಿಎಂ. ಮಾಡಿಕೊಂಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಬರೆದಿರುವ ಜಾತಿ ಮತ್ತು ಪಂಗಡದ ಹಣವನ್ನು ಉಚಿತ ಗ್ಯಾರೆಂಟಿಗಳಿಗೆ ಹಣ ಒದಗಿಸಲಾಗುತ್ತಿದೆ ಎಂದು ಆರೋಪಿಸಿದರು.
ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೆಸರು ಕೂಡ ಹಗರಣದಲ್ಲಿ ಕೇಳಿ ಬಂದಿದ್ದು. ರಾಜ್ಯದಲ್ಲಿ ಬರಗಾಲವಿದೆ. ರೈತರು ಕಂಗಾಲಾಗಿದ್ದಾರೆ. ಅನ್ನದಾತ ಸಂಕಷ್ಟಕ್ಕೀಡಾಗಿದ್ದಾನೆ. ಆತ್ಮಹತ್ಯೆ ಮಾಡಿಕೊಂಡಿರುವ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧಿಕಾರಿ ಚಂದ್ರಶೇಖರನ್ ಡೆತ್ನೋಟ್ನಲ್ಲಿ ಸಚಿವರ ಹೆಸರು ಬರೆದಿದ್ದಾರೆ. ಎಸ್ಸಿ.ಪಿ. ಟಿಎಸ್ಸ್ಪಿ. ಹಣ ದುರುಪಯೋಗವಾಗಿದೆ. ಈ ನಿಟ್ಟಿನಲ್ಲಿ ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ಕೊಡಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.
ಮೊಳಕಾಲ್ಮೂರು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ನೇರ್ಲಗುಂಟೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಾಲ್ಮೀಕಿ ಜನಾಂಗದ ಹಣವೇ ಬೇಕಿತ್ತ. 187 ಕೋಟಿ ರೂ.ಗಳನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಸಿಕೊಂಡು ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರದಲ್ಲಿ ತೊಡಗಿದೆ. ಮುಖ್ಯಮಂತ್ರಿ ರಾಜಿನಾಮೆ ಕೊಡಬೇಕು ಅಲ್ಲಿಯವರೆಗೂ ನಮ್ಮ ಹೋರಾಟ ಇದ್ದೇ ಇರುತ್ತದೆ ಎಂದರು.
ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ವಿ.ರಾಮಚಂದ್ರಪ್ಪ, ಬಿಜೆಪಿ. ಎಸ್ಟಿ. ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ರಾಜ್ಯ ಕಾರ್ಯದರ್ಶಿ ಶರಣ್ ತಾಳಿಕೆರೆ, ಎಸ್.ಲಿಂಗಮೂರ್ತಿ, ಉಮೇಶ್ ಕಾರಜೋಳ, ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿ, ಹನುಮಂತೆಗೌಡ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ಯಾದವ್, ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ಯುವ ಮುಖಂಡರುಗಳಾದ ಎಂ.ಸಿ.ರಘುಚಂದನ್, ಕುಮಾರಸ್ವಾಮಿ, ಜಿ.ಎಸ್.ಅನಿತ್ಕುಮಾರ್, ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಡಾ.ಸಿದ್ದಾರ್ಥ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಮಾಧುರಿ ಗಿರೀಶ್, ಜಿ.ಟಿ.ಸುರೇಸ್ಸಿದ್ದಾಪರ, ಪಿ.ಸಂಪತ್ಕುಮಾರ್, ಬಾಳೆಕಾಯಿ ರಾಂದಾಸ್, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್ಬೇದ್ರೆ ಸೇರಿದಂತೆ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಚಿತ್ರದುರ್ಗ ಜಿಲ್ಲೆಯಾದ್ಯಂತ ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.