ಬ್ರೇಕ್ ಡಾನ್ಸ್ ಮಿಷನ್ ಹುಡುಗನ ಜೀವ ತೆಗೆಯಿತು!
– ಹೊಸದುರ್ಗ: ಡ್ಯಾನ್ಸ್ ಮಾಡಲು ಹೋಗಿ ಅವಘಡ
– ಚಿತ್ರದುರ್ಗ: ಅದಿರು ಲಾರಿಗಳ ನೊಂದಣಿ ರದ್ದು!?
– ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆರ್ಡರ್
NAMMUR EXPRESS NEWS
ಚಿತ್ರದುರ್ಗ: ಎಕ್ಸಿಬಿಷನ್ನ ಬ್ರೇಕ್ ಡಾನ್ಸ್ ಕಂಪಾರ್ಟ್ಮೆಂಟ್ ಕೆಳಗೆ ಬಿದ್ದು ಯುವಕ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದ ಹಳೇ ಮಾಧ್ಯಮಿಕ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ. ಪಟ್ಟಣದ ವಿನಾಯಕ ಬಡಾವಣೆಯ ಖಲಂದರ್ (23) ಮೃತ. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಖಲಂದರ್ ಜೂನ್ 30ರಂದು ರಾತ್ರಿ 8.30ಕ್ಕೆ ಎಕ್ಸಿಬಿಷನ್ ಆವರಣದಲ್ಲಿದ್ದ ಬ್ರೇಕ್ ಡಾನ್ಸ್ ಕಂಪಾರ್ಟ್ಮೆಂಟ್ಗೆ ಹೋಗಿದ್ದಾನೆ. ಈ ವೇಳೆ ಡ್ಯಾನ್ಸ್ ಮಾಡುವಾಗ ಕಬ್ಬಿಣದ ಕಂಬಕ್ಕೆ ಬಿದ್ದಿದ್ದಾನೆ. ಕೂಡಲೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅದಿರು ಲಾರಿಗಳ ನೊಂದಣಿ ರದ್ದುಗೊಳಿಸಲು ಜಿಲ್ಲಾಧಿಕಾರಿ ಸೂಚನೆ
ಚಿತ್ರದುರ್ಗ: ಕಡ್ಲೆಗುದ್ದು ಹಾಗೂ ಸಾಸಲು ರಸ್ತೆಗಳಲ್ಲಿ ಅದಿರು ತುಂಬಿರುವ ಬೃಹತ್ ವಾಹನಗಳು ಸಂಚಾರ ಮಾಡುತ್ತಿವೆ. ಈ ವಾಹನಗಳಿಂದ ರಸ್ತೆ ಹಾಳಾಗುವುದರ ಜೊತೆ ಪರಿಸರ ಮಾಲಿನ್ಯವು ಉಂಟಾಗುತ್ತಿದೆ. ಈ ವಾಹನಗಳ ಪೈಕಿ 20 ವರ್ಷ ಪೂರೈಸಿದ ವಾಹನಗಳ ನೊಂದಣಿಯನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ರದ್ದು ಪಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದ್ದಾರೆ.