ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ!!
* ದಸರಾ ಮಹೋತ್ಸವದ ಕಾರ್ಯಕ್ರಮ, ಹಲವು ನಾಯಕರು ಭಾಗಿ!
* ಮೈಸೂರು ದಸರಾ ಕಾರ್ಯಕ್ರಮದ ಸಂಪೂರ್ಣ ವಿವರ!
NAMMUR EXPRESS NEWS
ಮೈಸೂರು : ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ್ದಾರೆ.
ಸಾಹಿತಿ ಹಂಪ ನಾಗರಾಜಯ್ಯ ಅವರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ. ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ರಾಝ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಹೆಚ್.ಕೆ.ಪಾಟೀಲ್, ರಾಮಲಿಂಗ ರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್ ಭಾಗವಹಿಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದಾರೆ.
* ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮ ಉದ್ಘಾಟನೆ!
ದಸರಾ ನಿಮಿತ್ತ ಅ. 3ರಂದು ಬೆಳಗ್ಗೆ 11:30 ಗಂಟೆಗೆ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿನ ಘಟಿಕೋತ್ಸವ ಭವನದಲ್ಲಿ ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.
* ದಸರಾ ಆಹಾರ ಮೇಳ ಉದ್ಘಾಟನೆ!
11:30 ಗಂಟೆಗೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಲಿದ್ದಾರೆ.
* ಫಲಪುಷ್ಪ ಪ್ರದರ್ಶನ ಉದ್ಘಾಟನೆ
ಮಧ್ಯಾಹ್ನ 12:30 ಗಂಟೆಗೆ ನಗರದ ಕುಪ್ಪಣ್ಣ ಪಾರ್ಕ್ (ನಿಶಾದ್ ಬ್ಯಾಗ್) ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.
* ದಸರಾ ಕುಸ್ತಿ ಉದ್ಘಾಟನೆ!
ಸಂಜೆ 04 ಗಂಟೆಗೆ ನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅವರಣದಲ್ಲಿನ ದೇವರಾಜ ಅರಸೋದ್ದೇಶ ಕ್ರೀಡಾಂಗಣದಲ್ಲಿ “ದಸರಾ ಕುಸ್ತಿ ಪಂದ್ಯಾವಳಿ” ವಿವಿಧ ಉದ್ಘಾಟನೆ, ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ.
* ದಸರಾ ಶಿಲ್ಪಕಲೆ ಮತ್ತು ಚಿತ್ರಕಲಾ ಶಿಬಿರ ಉದ್ಘಾಟನೆ
ಸಂಜೆ 4 ಗಂಟೆಗೆ ಸಿದ್ಧಾರ್ಥ ನಗರದಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಶಾಲೆಯಲ್ಲಿ “ರಾಜ್ಯಮಟ್ಟದ ಶಿಲ್ಪಕಲೆ ಮತ್ತು ಚಿತ್ರಕಲಾ ಶಿಬಿರ”ದಲ್ಲಿ ರಚಿಸಲಾದ ಕಲಾ ಪ್ರದರ್ಶನಗಳು, ಲಲಿತ ಕಲೆಗಳು, ಕರಕುಶಲ ಕಲೆಗಳ ಕಲಾಕೃತಿ ಪ್ರದರ್ಶನ ಮತ್ತು ರಾಷ್ಟ್ರಮಟ್ಟದ ಕರಕುಶಲ ಕಲೆಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ, ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಲಿದ್ದಾರೆ.
* ದಸರಾ ಸಿಎಂ ಕಪ್ ಕ್ರೀಡಾಕೂಟಕ್ಕೆ ಚಾಲನೆ
ಸಂಜೆ 4:30 ಗಂಟೆಗೆ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ, ಈ ಕಾರ್ಯಕ್ರಮವನ್ನು ಸಿಎಂ ಉದ್ಘಾಟಿಸಲಿದ್ದಾರೆ.
* ದಸರಾ ಪುಸ್ತಕ ಮೇಳ ಉದ್ಘಾಟನೆ
ಸಂಜೆ 5 ಗಂಟೆಗೆ ನಗರದ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಪುಸ್ತಕ ಮೇಳವನ್ನು ಆಯೋಜಿಸಲಾಗಿದೆ, ಕಾರ್ಯಕ್ರಮ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಚಿವ ಶಿವರಾಜ್ ತಂಗಡಗಿ ಅವರು ಉದ್ಘಾಟಿಸಲಿದ್ದಾರೆ.
* ದಸರಾ ನವರಾತ್ರಿ ಜಾನಪದ ರಂಗ ಉತ್ಸವ ಉದ್ಘಾಟನೆ
ಸಂಜೆ 5:30 ಗಂಟೆಗೆ ನಗರದ ಕಲಾಮಂದಿರದಲ್ಲಿನ ರಂಗಾಯಣದ ಭೂಮಿಗೀತದ ರಂಗ ಮಂದಿರದಲ್ಲಿ “ನವರಾತ್ರಿ ಜಾನಪದ ರಂಗ ಉತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ, ಈ ಕಾರ್ಯಕ್ರಮವನ್ನು ಸಹ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಲಿದ್ದಾರೆ.
* ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ
ಸಂಜೆ 6 ಗಂಟೆಗೆ ಅರಮನೆಯ ಸಭಾಂಗಣದಲ್ಲಿ ನಾಡಹಬ್ಬ ಪ್ರಯುಕ್ತ ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ.
* ದಸರಾ ದೀಪಾಲಂಕಾರಕ್ಕೆ ಚಾಲನೆ
ಸಂಜೆ 6.30ಕ್ಕೆ ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಹಸಿರು ಮಂಟಪದ ಬಳಿ ವಿದ್ಯುತ್ ದೀಪಾಲಂಕಾರ ಹಾಗೂ ದೀಪಾಲಂಕಾರಗೊಂಡಿರುವ ವಿದ್ಯುತ್ ರಥದ ಕಾರ್ಯಕ್ರಮ ಆಯೋಜಿಸಲಾಗಿದೆ, ಚಾಲನೆ ಕಾರ್ಯಕ್ರಮ ಇಂಧನ ಸಚಿವ ಕೆ.ಜೆ. ಜಾರ್ಜ್ ಉದ್ಘಾಟಿಸಲಿದ್ದಾರೆ.
* ವಸ್ತು ಪ್ರದರ್ಶನ ಪ್ರದರ್ಶನ
ರಾತ್ರಿ 7.30ಕ್ಕೆ ನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಉದ್ಘಾಟನಾ ವಸ್ತು ಪ್ರದರ್ಶನ ಕಾರ್ಯಕ್ರಮ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ