ಮೈಸೂರಿನಲ್ಲಿ ಬಾವಿ ಪತ್ನಿ ಕೊಂದು ನೇಣು ಹಾಕಿದನೇ ಗಂಡ!?
– ಎಚ್.ಡಿ.ಕೋಟೆಯಲ್ಲಿ ನಡೆದ ದುರಂತ: ಕೊಲೆ ಮಾಡಿಲ್ಲ ಎಂದ!
– ಹಾಸನದಲ್ಲಿ ಶಾರ್ಟ್ ಸರ್ಕ್ಯೂಟ್: ಐವರು ಪ್ರಾಣಾಪಾಯದಿಂದ ಪಾರು
NAMMUR EXPRESS NEWS
ಮೈಸೂರು: ಬಾವಿ ಪತ್ನಿಯನ್ನು ಕೊಂದು ನೇಣು ಹಾಕಿರುವ ಆರೋಪವೊಂದು ಕೇಳಿ ಬಂದಿದೆ. ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಕವಿತಾ (20) ಕೊಲೆಯಾದ ದುರ್ದೈವಿ. ನಿರಂಜನ ಅಲಿಯಾಸ್ ಜಗ್ಗ ಎಂಬಾತನ ಮೇಲೆ ಕೊಲೆ ಆರೋಪವಿದೆ.
ಪುಟ್ಟಮಲ್ಲಪ್ಪ ಹಾಗೂ ಶಿವನಂಜಮ್ಮ ದಂಪತಿ ಪುತ್ರಿ ಕವಿತಾಳಿಗೆ ಇದೇ ಅಕ್ಟೋಬರ್ 21ಕ್ಕೆ ನಿರಂಜನ ಜತೆಗೆ ಮದುವೆ ದಿನಾಂಕ ನಿಶ್ಚಯವಾಗಿತ್ತು. ಕವಿತಾ ಪೋಷಕರು ಜಮೀನಿಗೆ ಹೋದಾಗ ನಿರಂಜನ ಮನೆಗೆ ಬಂದಿದ್ದ. ಈ ವೇಳೆ ಕವಿತಾ ಜತೆಗೆ ಜಗಳ ಮಾಡಿ ಕೊಲೆ ಮಾಡಿ ನೇಣು ಹಾಕಿ ಪರಾರಿ ಆಗಿದ್ದಾನೆ. ಮನೆಯ ಹೆಂಚು ತೆಗೆದು ಓಡಿ ಹೋಗುವಾಗ ಗ್ರಾಮಸ್ಥರಿಂದ ತಡೆಯುವ ಯತ್ನ ನಡೆದಿದೆ.
ಎಚ್.ಡಿ.ಕೋಟೆ ಅಂತರಸಂತೆ ಠಾಣೆಗೆ ತೆರಳಿ ಪೊಲೀಸರಿಗೆ ಆರೋಪಿ ಶರಣಾಗಿದ್ದಾನೆ. ನಾನು ಕೊಲೆ ಮಾಡಿಲ್ಲ. ಜನರು ಹೊಡೆದು ಸಾಯಿಸಿ ಬಿಡುತ್ತಾರೆ ಎಂದು ಓಡಿ ಹೋದೆ ಅಷ್ಟೇ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಆದರೆ ಕವಿತಾ ಆತ್ಮಹತ್ಯೆ ಮಾಡಿಕೊಂಡಳಾ ಅಥವಾ ಕೊಲೆ ಆಗಿದ್ಯಾ? ಆಗಿದ್ದರೆ ಯಾಕಾಗಿ ಎಂಬ ಪ್ರಶ್ನೆ ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ.
ಶಾರ್ಟ್ ಸರ್ಕ್ಯೂಟ್್ರ; ಐವರು ಪ್ರಾಣಾಪಾಯದಿಂದ ಪಾರು
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು, ಮನೆಯಲ್ಲಿದ್ದ ವಸ್ತುಗಳೆಲ್ಲಾ ಬೆಂಕಿಗಾಹುತಿ ಆಗಿವೆ. ವಾಸದ ಮನೆಯಲ್ಲಿದ್ದ ಐದು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನ ನಗರದ ಹೊಸಲೈನ್ ರಸ್ತೆಯಲ್ಲಿ ಘಟನೆ ನಡೆದಿದೆ. ಮುಸ್ತಾಫ್ ಎಂಬುವವರಿಗೆ ಸೇರಿದ ಮನೆಯಲ್ಲಿ ರೆಫ್ರಿಜರೇಟರ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿದೆ. ಆರು ಮನೆಗಳಿರುವ ಕಟ್ಟಡದ ಮೊದಲನೇ ಮಹಡಿಯಲ್ಲಿರುವ ಬೆಂಕಿ ಅವಘಡ ನಡೆದಿದೆ. ಅದೃಷ್ಟವಶಾತ್ ರೆಫ್ರಿಜರೇಟರ್ನಲ್ಲಿ ಪಕ್ಕದಲ್ಲೆ ಇದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಮನೆ ಮಂದಿ ಎಲ್ಲ ಹೊರಗೆ ಓಡಿ ಬಂದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.