ರಾಜ್ಯದಲ್ಲಿ ರಣ ಬಿಸಿಲು!
– ಬಿಸಿಲಿಂದ ಮನೆಯಿಂದ ಹೊರ ಹೋಗಲು ಆಗುತ್ತಿಲ್ಲ
– ಕರೆಂಟ್ ಇರಲ್ಲ, ನೀರು ಸಿಗುತ್ತಿಲ್ಲ: ಮುಂದೆ ಕಷ್ಟ ಕಷ್ಟ!
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ಜಳಕ್ಕೆ ಜನರು ತತ್ತರಿಸಿದ್ದಾರೆ. ಈ ನಡುವೆ ರಾಜ್ಯದಲ್ಲಿ ಈ ವರ್ಷ ಬರೋಬ್ಬರಿ ನಾಲ್ಕು ತಿಂಗಳು ರಣಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಬಿಸಿಲಿನ ಕಾವು ಹೆಚ್ಚಿದ್ದು, ವಾಡಿಕೆಗಿಂತ ಮುನ್ನವೇ ರಾಜ್ಯದಲ್ಲಿ ಬಿಸಿಲಿನ ಕಾವು ಹೆಚ್ಚಿದೆ.
ಸಾಮಾನ್ಯವಾಗಿ ಮಾರ್ಚ್ ನಿಂದ ಮೇ ತಿಂಗಳವರೆಗೆ ಬೇಸಿಗೆ ಇರುತ್ತದೆ. ಆದರೆ ಈ ಬಾರಿ ವಾಡಿಕೆಗಿಂತ ಮುನ್ನವೇ ಬೇಸಿಗೆ ಶುರುವಾಗುಂತಾಗಿದ್ದು, ನಾಲ್ಕು ತಿಂಗಳು ಬೇಸಿಗೆ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಉಷ್ಣತೆ ಹೆಚ್ಚಳ, ಬಿಸಿಗಾಳಿಯ ಆತಂಕ ಎದುರಾಗಿದ್ದು, ಏಪ್ರಿಲ್ ಮತ್ತು ಮೇ ನಲ್ಲಿ ಶಾಖಾ ತರಂಗ ಬೀಸಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಮಲೆನಾಡು, ಕರಾವಳಿಯಲ್ಲಿ ಕೃಷಿಗೆ ಹೊಡೆತ
ಮಳೆ ಮುಗಿಯುವ ಮುನ್ನ ಬಿಸಿಲ ಝಳ ಹೆಚ್ಚಳದಿಂದ ಅಡಿಕೆ ಗಿಡಗಳು ಒಣಗುತ್ತಿರುವ ದೃಶ್ಯಗಳು ಎಲ್ಲೆಡೆ ಕಾಣುತ್ತಿದೆ. ಅದರ ಜೊತೆಗೆ ವಿದ್ಯುತ್ ಕಟ್ ನಿಂದಾಗಿ ಅಡಿಕೆ ತೋಟಗಳು ಹಾಗೂ ಇತರೆ ಕೃಷಿ ಚಟುವಟಿಕೆಗೆ ನೀರಿಲ್ಲದಂತಾಗಿದೆ. ಹೀಗಾಗಿ ಜನ ಕೂಡ ಸರ್ಕಾರದ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ. ಒಂದು ಕಡೆ ವಿದ್ಯುತ್ ಫ್ರೀ ಕೊಟ್ಟು, ಇನ್ನೊಂದು ಕಡೆ ವಿದ್ಯುತ್ ಕಡಿತಗೊಳಿಸುವುದರಿಂದ ಕೃಷಿ ಚಟುವಟಿಕೆ ಕುಂಠಿತಗೊಳ್ಳುವ ಸಾಧ್ಯತೆ ಹೆಚ್ಚಿದೆ. ಪ್ರತಿದಿನ ಲೋಡ್ ಶೆಡ್ಡಿಂಗ್ ಯಿಂದಾಗಿ ವಿದ್ಯುತ್ ಇರುವುದಿಲ್ಲ. ಜೊತೆಗೆ ಬಿಸಿಲೆ ಜಲ ಹೆಚ್ಚಾಗಿರುವುದರಿಂದ ಕೃಷಿ ಚಟುವಟಿಕೆಯಲ್ಲಿ ತೊಂದರೆ ಆಗಿದೆ.
ಕಾಯಿಲೆಗಳು ಉಲ್ಬಣ!
ರಾಜ್ಯದಲ್ಲಿ ಬಿಸಿಲು ಬೇಗೆ ಹೆಚ್ಚುತ್ತಿದ್ದಂತೆ ಋುತುಮಾನದ ಕಾಯಿಲೆಗಳಾದ ಕಾಲರಾ, ವಿಷಮಶೀತ ಜ್ವರ, ಕಣ್ಣಿನ ತೊಂದರೆ, ವೈರಲ್ ಸೋಂಕು, ನಿರ್ಜಲೀಕರಣ, ಹೊಟ್ಟೆ ನೋವು, ಡೆಂಗೆ, ಚಿಕನ್ ಫಾಕ್ಸ್ ಬಿಸಿನಿಲಿಂದ ತಲೆ ಸುತ್ತು, ಮೂಗಿನಲ್ಲಿ ರಕ್ತ ಸುರಿಯುವುದು, ಅತಿಯಾದ ಸೂರ್ಯಕಿರಣಗಳಿಂದ ಚರ್ಮ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತಿವೆ. ಇದಕ್ಕೆ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆಯು ಹೆಚ್ಚಾಗಿ ಆಸ್ಪತ್ರೆ ಫುಲ್ ರಶ್ ಆಗಿದೆ.