ಉಡುಪಿ – ಚಿಕ್ಕಮಗಳೂರು: ಹಲವೆಡೆ ಗೊಂದಲ!
– ಬಿರುಸಿನ ಮತದಾನ: ಮತ ಹಾಕಿದ ಶ್ರೀಗಳು
– ಆರಂಭದಲ್ಲೇ ಕೈಕೊಟ್ಟ ಇವಿಎಂ, ಮತದಾನ ಸ್ಥಗಿತ
– ರಂಭಾಪುರಿ, ಹರಿಹರಪುರ ಶ್ರೀಗಳಿಂದ ಮತದಾನ
NAMMUR EXPRESS NEWS
ಚಿಕ್ಕಮಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಶುರು. ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಉಡುಪಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತದಾನ ಬಿರುಸು ಪಡೆದುಕೊಂಡಿದೆ. ಮತದಾನ ಮಾಡಲು ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ- ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಇನ್ನು ರಾಜ್ಯದ ಹಲವೆಡೆ ಮತಯಂತ್ರವು ಆರಂಭದಲ್ಲೇ ಕೈಕೊಟ್ಟಿದ್ದು, ಕೆಲಕಡೆ ವೋಟಿಂಗ್ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಇವಿಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತ:
ಚಿಕ್ಕಮಗಳೂರಿನ ಆರೆನೂರು ಗ್ರಾಮದ ಮತಗಟ್ಟೆ ಸಂಖ್ಯೆ 53 ರಲ್ಲಿ ಇವಿಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡಿತು. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾದಗಿ ಕೆಲವೇ ನಿಮಿಷಗಳಲ್ಲಿ ಮತದಾನ ಸ್ಥಗಿತಗೊಂಡಿದೆ. ಆರೆನೂರು ಗ್ರಾಮದ ಮತಗಟ್ಟೆ ಸಂಖ್ಯೆ 53 ರಲ್ಲಿ ಮತದಾನ ಸ್ಥಗಿತಗೊಂಡಿತ್ತು. ಮತದಾನಕ್ಕಾಗಿ ಮತದಾರರು ಸರದಿಯಲ್ಲಿ ಕಾದು ನಿಂತ ದೃಶ್ಯಗಳು ಕಂಡುಬಂದವು.
ರಂಭಾಪುರಿ, ಹರಿಹರಪುರ ಶ್ರೀಗಳಿಂದ ಮತದಾನ
ಬಾಳೆಹೊನ್ನೂರು ರಂಭಾಪುರಿ ಮಠದ ಶ್ರೀಗಳು ಎಲ್ಲರಿಗಿಂತ ಮೊದಲು ಮತದಾನ ಮಾಡಿ ಮಾದರಿಯಾಗಿದ್ದಾರೆ. ಈ ವೇಳೆ ಮತದಾನ ಸಂವಿಧಾನ ಕೊಟ್ಟ ಅಧಿಕಾರ ಎಂಬುದು ಮರೆಯಬೇಡಿ. ಸಧೃಢ ಭಾರತ ನಿರ್ಮಾಣಕ್ಕಾಗಿ ಎಲ್ಲರೂ ಮತದಾನ ಮಾಡುವಂತೆ ಕರೆ ನೀಡಿದ್ದಾರೆ. ಪ್ರತಿ ಚುನಾವಣೆಯಲ್ಲೂ ರಂಭಾಪುರಿ ಮಠದ ಬೂತ್ ನ ಜನ ಶ್ರೀಗಳು ಮತದಾನ ಮಾಡುವವರೆಗೂ ಕಾಯುತ್ತಾರೆ. ಬಳಿಕವಷ್ಟೇ ಉಳಿದವರು ಮಾಡುತ್ತಾರೆ. ಇನ್ನು ಕೊಪ್ಪದ ಹರಿಹರಪುರದಲ್ಲಿ ಹರಿಹರಪುರ ಶ್ರೀಗಳು ಮತದಾನ ಮಾಡಿದ್ದಾರೆ.