ನ್ಯೂಸ್ ಪೇಪರ್ನಲ್ಲೇ 12 ಅಡಿ ಗಣೇಶ!
– ದಾವಣಗೆರೆ ಸಿದ್ದಗಂಗಾ ಶಾಲೆಯ ವಿದ್ಯಾರ್ಥಿಗಳ ಪರಿಸರ ಪ್ರೇಮಿ ಗಣೇಶ
NAMMUR EXPRESS NEWS
ದಾವಣಗೆರೆ: ದಾವಣಗೆರೆ ನಗರದ ಸಿದ್ದಗಂಗಾ ಶಾಲೆಯ ಮಕ್ಕಳು ನ್ಯೂಸ್ ಪೇಪರ್ನಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ. ಪಿಒಪಿ ಗಣೇಶನ ಮೂರ್ತಿಯ ಹಾವಳಿಯಲ್ಲಿ ಪರಿಸರ ಸ್ನೇಹಿ ಗಣೇಶಗಳ ನಿರ್ಮಾಣ ಕಡಿಮೆಯಾಗುತ್ತಿದೆ. ಈ ನಡುವೆ 12 ಅಡಿ ಪೇಪರ್ ಅಲ್ಲಿ ಮಾಡಿದ ಗಣೇಶನ ಮೂರ್ತಿ ಗಮನ ಸೆಳೆದಿದೆ.
ಪ್ರಧಾನಿ ನರೇಂದ್ರ ಮೋದಿಯವರು ಪರಿಸರ ಸ್ನೇಹಿ ಗಣೇಶಗಳಿಗೆ ಒತ್ತು ನೀಡಿ ಎಂದು ಕರೆ ನೀಡಿದ ಬೆನ್ನಲ್ಲೇ ನಗರದ ಸಿದ್ದಗಂಗಾ ಶಾಲೆಯ ಮಕ್ಕಳು ಅನುಪಯುಕ್ತ ನ್ಯೂಸ್ ಪೇಪರ್ನಲ್ಲಿ ಗಣೇಶನ ಮೂರ್ತಿ ನಿರ್ಮಾಣ ಮಾಡಿ ಪ್ರತಿಷ್ಠಾಪಿಸಿದ್ದಾರೆ. ಆ ಗಣೇಶನ ಮೂರ್ತಿ ಜನರನ್ನು ಆಕರ್ಷಿಸುತ್ತಿದೆ.
ಈ ಶಾಲೆಯಲ್ಲಿ ಏಳನೇ ವರ್ಷದ ಗಣೇಶೋತ್ಸವ ಆಚರಿಸಿದ್ದು, ಒಟ್ಟು 12 ಅಡಿಯ ಗಣೇಶನ ಮೂರ್ತಿಯನ್ನು ಸಂಪೂರ್ಣವಾಗಿ ಪೇಪರ್ನಿಂದ ನಿರ್ಮಾಣ ಮಾಡಲಾಗಿದೆ. ನಿರ್ಮಿಸಲು 10 ದಿನ ಹಿಡಿದಿದ್ದು, 40 ಕೆಜಿ ಪೇಪರ್ ಬಳಕೆ ಮಾಡಿ ಗಣೇಶನ ಮೂರ್ತಿ ನಿರ್ಮಿಸಲಾಗಿದೆ. ಗಣೇಶನ ಮೂರ್ತಿ ನಿರ್ಮಾಣಕ್ಕೆ ಮೈದಾ ಗಮ್ ಬಳಸಿದ್ದಾರೆ ಹಾಗೂ ಪರಿಸರಕ್ಕೆ ಹಾನಿ ಮಾಡುವ ಬಣ್ಣವನ್ನು ಇದಕ್ಕೆ ಬಳಕೆ ಮಾಡದೆ ಇರುವುದು ವಿಶೇಷವಾಗಿದೆ.