ರೇಣುಕಾಚಾರ್ಯ ಬಿಜೆಪಿಗೆ ಗುಡ್ ಬೈ!?
– ದಾವಣಗೆರೆ ಲೋಕಸಭಾ ಬಿಜೆಪಿ ಟಿಕೆಟ್ ಆಕಾಂಕ್ಷಿ
– ಟಿಕೆಟ್ ಸಿಗದಿದ್ರೆ ಕಾಂಗ್ರೆಸ್ ಕಡೆ ಪಯಣ?
– ಸಿಎಂ, ಡಿಸಿಎಂ ಜತೆ ಮಾತುಕತೆ: ಏನಿದು ಆಪರೇಷನ್ ಕೈ?
NAMMUR EXPRESS NEWS
ದಾವಣಗೆರೆ: ರಾಜ್ಯ ರಾಜಕೀಯ ದಿನೇ ದಿನೇ ರೋಚಕ ಘಟ್ಟಕ್ಕೆ ತಲುಪುತ್ತಿದೆ. ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ. ಈ ನಡುವೆ ಹೊಸ ಸುದ್ದಿ ಈಗ ರಾಜ್ಯದಲ್ಲಿ ಓಡಾಡುತ್ತಿದೆ. ನಾನು ಕೂಡ ದಾವಣಗೆರೆ ಲೋಕಸಭಾ ಟಿಕೆಟ್ ಆಕಾಂಕ್ಷಿ, ಟಿಕೆಟ್ ಬೇಕು ಅಂತ ಕೇಳಿದ್ದೇನೆ. ವರಿಷ್ಠರು ಏನ್ ತೀರ್ಮಾನ ಮಾಡ್ತಾರೆ ಅಂತ ನೋಡಬೇಕು ಎಂದು ಎಂಪಿ ರೇಣುಕಾಚಾರ್ಯ ಹೇಳಿರುವುದು ಹಲವು ಚರ್ಚೆಗೆ ಕಾರಣ ಆಗಿದೆ ಕರ್ನಾಟಕ ಬಿಜೆಪಿಯ ಕೆಲ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಯ ಬೆನ್ನಲ್ಲೇ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರಿದ್ದಾರೆ. ಜಿಲ್ಲೆಯಲ್ಲಿ ಎರಡು ಮೂರು ನಾಯಕರು ಕಾಂಗ್ರೆಸ್ ಕಡೆಗೆ ಹೋಗಲು ಸಿದ್ದರಾಗಿದ್ದಾರೆ. ಈ ನಡುವೆ ಹೊನ್ನಾಳಿ ಮಾಜಿ ಶಾಸಕ ರೇಣುಕಾಚಾರ್ಯ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕೆಲ ಹಾಲಿ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಿರುವ ರೇಣುಕಾಚಾರ್ಯ ಅವರ ನಡೆ ಬಿಜೆಪಿ ಪಾಳಯದಲ್ಲಿ ತಲ್ಲಣ ಮೂಡಿಸಿದೆ. ಬಾರಿ ಕುತೂಹಲ ಮೂಡಿಸಿರುವ ರೇಣುಕಾಚಾರ್ಯ ಅವರು ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಎಂ ಅವರೊಂದಿಗೆ ಚರ್ಚೆ ಮಾಡಿದ ಅವರು, ಕ್ಷೇತ್ರದ ಸಂಬಂಧ ಚರ್ಚೆ ನಡೆಸಿ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.