ಕನ್ನಡದ ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪ ಇನ್ನಿಲ್ಲ!
– ಕನ್ನಡದ ಖ್ಯಾತ ಕಾದಂಬರಿಕಾರ ಇನ್ನು ನೆನಪು ಮಾತ್ರ
– 94 ವರ್ಷ ವಯಸ್ಸಿಗೆ ಇಹಲೋಕ ತ್ಯಜಿಸಿದ ಸಾಧಕ
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ಕನ್ನಡಕ್ಕೆ ಮೊದಲ ಸರಸ್ವತಿ ಸಮ್ಮಾನ ಪ್ರಶಸ್ತಿಯನ್ನು ತಂದುಕೊಟ್ಟ ಕನ್ನಡದ ಖ್ಯಾತ ಕಾದಂಬರಿಕಾರರಾದ ಎಸ್.ಎಲ್. ಭೈರಪ್ಪ ಅವರು ವಯೋಸಹಜ ಕಾಯಿಲೆಯಿಂದ ಬುಧವಾರ ಬೆಂಗಳೂರಿನ ರಾಜಾಜಿನಗರದ ಆಸ್ಪತ್ರೆಯಲ್ಲಿ ನಿಧನನರಾಗಿದ್ದಾರೆ.
ವಂಶವೃಕ್ಷ, ನಾಯಿ ನೆರಳು, ಗ್ರಹಣ, ಕವಲು, ಯಾನ, ಉತ್ತರಕಾಂಡ ಸೇರಿದಂತೆ ಇಪ್ಪತ್ತೇಳಕ್ಕೂ ಹೆಚ್ಚು ಕಾದಂಬರಿಗಳನ್ನು ಮತ್ತು ಅವ್ವ ಎನ್ನುವ ಸಣ್ಣ ಕಥೆಯನ್ನು ರಚಿಸುವ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದರು. ಇವರ ಪುಸ್ತಕಗಳು ಭಾರೀ ಸಂಚಲನ ಸೃಷ್ಟಿ ಮಾಡಿದ್ದವು.ಇದೀಗ ಅವರ ಸಾವಿಗೆ ಎಲ್ಲೆಡೆ ಸಂತಾಪ ವ್ಯಕ್ತವಾಗುತ್ತಿದೆ.
ಭಾವ ಪೂರ್ಣ ಶ್ರದ್ಧಾಂಜಲಿ








