ಹಾಸನದಲ್ಲಿ ಗಣಪತಿ ಮೆರವಣಿಗೆ ವೇಳೆ 9 ಜನ ಸಾವು!
– ಮೆರವಣಿಗೆ ವೇಳೆ ಜನರ ಮೇಲೆ ನುಗ್ಗಿದ ಟ್ರಕ್
– 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
– ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ದುರಂತ
NAMMUR EXPRESS BREAKING NEWS
ಹಾಸನ: ಗಣಪತಿ ಮೂರ್ತಿವಿಸರ್ಜನಾ ಮೆರವಣಿಗೆ ವೇಳೆ ಏಕಾಏಕಿ ನುಗ್ಗಿದ ಟ್ರಕ್ 8ಕ್ಕೂ ಹೆಚ್ಚು ಮಂದಿ ಬಲಿ ಪಡೆದ ಘೋರ ದುರಂತ ಹಾಸನದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್ ಹರಿದಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನು ನಾಲ್ವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಗಾಯಗೊಂಡಿರುವವರೆಗೆ ಚಿಕಿತ್ಸೆ ಮುಂದುವರೆದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.
ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಗ್ರಾಮದಲ್ಲಿ ಜನರ ಆಕ್ರಂದನ ಮುಗಿಲು ಮುಟ್ಟಿದೆ.
ರಸ್ತೆಯ ಒಂದು ಬದಿಯಿಂದ ಏಕಾಏಕಿ ಡಿವೈಡರ್ ಗುದ್ದಿ ಯಮನಂತೆ ಬಂದ ಟ್ರಕ್, ನೇರವಾಗಿ ಸಾವಿರಾರು ಜನರಿದ್ದ ಮೆರವಣಿಗೆಗೆ ನುಗ್ಗಿದೆ.
ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.
ಇನ್ನು ಗಾಯಾಳುಗಳನ್ನು ವಿವಿಧ ರವಾನಿಸಲಾಗಿದೆ. ಸ್ಥಳಕ್ಕೆ ಜೆಡಿಎಸ್ ನಾಯಕರಾದ ನಿಖಿಲ್ ಕುಮಾರಸ್ವಾಮಿ, ರೇವಣ್ಣ, ಸೂರಜ್ ರೇವಣ್ಣ ಸೇರಿ ಅನೇಕ ನಾಯಕರು ಭೇಟಿ ನೀಡಿದ್ದಾರೆ.







