ಚುನಾವಣಾ ರಾಜಕೀಯದ ಇನ್ನಿಂಗ್ಸ್ ಮುಗಿಸಿದ ಡಿವಿಎಸ್!
– ಮಾಜಿ ಸಿಎಂ ಸದಾನಂದ ಗೌಡ ನಿವೃತ್ತಿ ಘೋಷಣೆ
– ನಗು ಮೊಗದ ನಾಯಕ ಹೀಗೆ ಮಾಡಿದ್ದು ಏಕೆ..?
NAMMUR EXPRESS NEWS
ಹಾಸನ : ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿ ನಾಯಕ, ಕೇಂದ್ರದ ಮಾಜಿ ಸಚಿವ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ತೀರ್ಮಾನಿಸಿದ್ದೇನೆ. ಹಾಗಾಗಿ ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಶಾಸಕನಾಗಿ, ಸಂಸದನಾಗಿ, ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವನಾಗಿ 30 ವರ್ಷಗಳ ರಾಜಕೀಯದಲ್ಲಿ ಅಧಿಕಾರ ಅನುಭವಿಸಿದ್ದೇನೆ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಯಡಿಯೂರಪ್ಪನವರನ್ನು ಬಿಟ್ಟರೆ ನಾನೇ ಪಕ್ಷದಲ್ಲಿ ಹೆಚ್ಚಿನ ಅಧಿಕಾರ ಅನುಭವಿಸಿರುವೆ.
10 ವರ್ಷ ಶಾಸಕ, 20 ವರ್ಷ ಸಂಸದ, 1 ವರ್ಷ ಮುಖ್ಯ ಮಂತ್ರಿ, ಒಂದೂವರೆ ವರ್ಷ ವಿಪಕ್ಷ ನಾಯಕ, 5 ವರ್ಷ ವಿಪಕ್ಷ ಉಪನಾಯಕ, ನಾಲ್ಕೂವರೆ ವರ್ಷ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ನರೇಂದ್ರ ಮೋದಿಯವರ ಸಚಿವ ಸಂಪುಟದ ಸದಸ್ಯನಾಗಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿರುವೆ ಎಂದು ಹೇಳಿದರು. ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆಯೂ ಅವರು ಕೇಂದ್ರದ ವರಿಷ್ಠರ ತೀರ್ಮಾನವಾಗಿದ್ದು, ಇಲ್ಲಿನ ನಾಯಕರ ಮಾತನ್ನೂ ಕೇಳಬೇಕಿತ್ತು ಎಂದು ಹೇಳಿದ್ದಾರೆ.
ಬಿಜೆಪಿಯಲ್ಲಿ ಹಿರಿಯರ ಮೂಲೆಗುಂಪು ಕಾರಣ ಆಯ್ತಾ?
ಸದಾನಂದ ಗೌಡ ಅವರು ನಿವೃತ್ತಿ ಘೋಷಣೆ ಮಾಡಿರುವುದು ಅವರ ನಿರ್ಲಕ್ಷ್ಯ ಮಾಡಿದ್ದಾರೆ ಎಂಬ ಕಾರಣಕ್ಕಾ ಎಂಬ ಚರ್ಚೆ ಶುರುವಾಗಿದೆ.