- ಹೆಲಿಕಾಪ್ಟರ್ ಅಪಾಯದಿಂದ ಪಾರಾದ ಯಡಿಯೂರಪ್ಪ!
- ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಲೋಪ: ಹೆಲಿಪ್ಯಾಡ್ ಕಡೆ ಹಾರಿಬಂದ ಪ್ಲಾಸ್ಟಿಕ್ ಚೀಲಗಳು
- ಕಲಬುರಗಿ ಜಿಲ್ಲೆ ಜೇವರ್ಗಿಯಲ್ಲಿ ನಡೆದ ಘಟನೆ
NAMMUR EXPRESS NEWS
ಕಲಬುರಗಿ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಲೋಪವಾಗಿದೆ.
ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಪ್ಲಾಸ್ಟಿಕ್ ಚೀಲಗಳು ಹಾರಿಬಂದಿವೆ. ಇದರಿಂದ ಅಪಾಯ ಆಗುವ ಸಾಧ್ಯತೆಗಳಿದ್ದು ಫೈಲಟ್ ಗಮನಿಸಿದ್ದರಿಂದ ಅನಾಹುತ ತಪ್ಪಿದೆ.
ಜೇವರ್ಗಿ ಪಟ್ಟಣ ಹೊರವಲಯದಲ್ಲಿ ಹೆಲಿಪಾಡ್ ನಿರ್ಮಿಸಲಾಗಿದೆ. ಹೆಲಿಪ್ಯಾಡ್ ಸುತ್ತು ಜಮೀನಿನಲ್ಲಿ ಪ್ಲಾಸ್ಟಿಕ್ ಚೀಲಗಳನ್ನು ಹಾಕಲಾಗಿದೆ. ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಮೇಲೆ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿದೆ.
ಪೈಲೆಟ್ ತಕ್ಷಣ ಎಚ್ಚೆತ್ತುಕೊಂಡು ಹೋಗಿದ್ದಾರೆ. ಉತ್ಪನ್ನ ಪ್ಲಾಸ್ಟಿಕ್ ಚೀಲಗಳನ್ನು ತೆರವು ಮಾಡಿದ ನಂತರ ಲ್ಯಾಂಡಿಂಗ್ ಮಾಡಲಾಗಿದೆ. ಪೈಲೆಟ್ ಸುತ್ತು ಹಾರಾಟ ನಡೆಸಿ ಲ್ಯಾಂಡ್ ಮಾಡಿದ್ದಾರೆ. ಅಧಿಕಾರಿಗಳು ಪ್ಲಾಸ್ಟಿಕ್ ಚೀಲದಿಂದ ಕಕ್ಕಾಬಿಕ್ಕಿಯಾಗಿದ್ದರು.