-ಕೊನೆಗೂ ಬೋನಿಗೆ ಬಿದ್ದ ನರಭಕ್ಷಕ
-ಆನೆಗೊಂದಿಯಲ್ಲಿ ಕಾರ್ಯಾಚರಣೆ ಯಶಸ್ವಿ
ಕೊಪ್ಪಳ: ಕಳೆದ ಕೆಲವು ತಿಂಗಳುಗಳಿಂದ ತೀವ್ರ ಉಪಟಳ ಕೊಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.
ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದ ಬಳಿಯ ಶ್ರೀ ಆದಿಶಕ್ತಿ ದುರ್ಗಾ ದೇವಿ ದೇವಸ್ಥಾನ ಸಮೀಪ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ.
ಚಿರತೆ ಹಾವಳಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಆನೆಗೊಂದಿ ಸುತ್ತಲಿನ ಪ್ರದೇಶದಲ್ಲಿ ಬೋನು ಇಡಲಾಗಿತ್ತು. ಚಿರತೆಗೆ ಇಬ್ಬರು ಬಲಿಯಾಗಿದ್ದು ಅರಣ್ಯ ಇಲಾಖೆಯಿಂದ ಎರಡು ತಿಂಗಳಿಂದ ಚಿರತೆ ಹಿಡಿಯಲು ಪ್ರಯತ್ನ ಸಾಗಿತ್ತು.
ಡಿಸೆಂಬರ್ ನಲ್ಲಿ ಚಿರತೆ ಸೆರೆಯಾಗಿದ್ದು ಕಮಲಾಪುರದ ಝೂ ಗೆ ಬಿಡಲಾಗಿತ್ತು. ಸೋಮವಾರ ಬೆಳಗಿನ ಜಾವ ಅರಣ್ಯ ಇಲಾಖೆಯ ಬೋನಿಗೆ ಮತ್ತೊಂದು ಚಿರತೆ ಬಿದ್ದಿದೆ.
ಸುಮಾರು 5 ವರ್ಷದ ಗಂಡು ಚಿರತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಬೋನಿಗೆ ಬಿದ್ದಿರುವ ಈ ಚಿರತೆ ನರಭಕ್ಷಕ ಎನ್ನುವುದು ಇನ್ನೂ ಖಚಿತವಾಗಿಲ್ಲ.







