ಶಿವಮೊಗ್ಗ ಸಂಸದ ರಾಘವೇಂದ್ರ ಅವರಿಗೆ ಮಹತ್ವದ ಹೊಣೆ
– ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಸಲಹಾ ಸಮಿತಿಗೆ ನೇಮಕ
– ಸಿಂಪಲ್ ಸಂಸದರಿಗೆ ಶುಭಾಶಯಗಳ ಮಹಾಪೂರ
NAMMUR EXPRESS NEWS
ತೀರ್ಥಹಳ್ಳಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಸಲಹಾ ಸಮಿತಿ ಸದಸ್ಯರಾಗಿ ಸಂಸದ ಬಿ.ವೈ. ರಾಘವೇಂದ್ರ ನೇಮಕವಾಗಿದ್ದಾರೆ. ಈಗಾಗಲೇ ರಾಜ್ಯದ ಮೆಚ್ಚಿನ ಸಂಸದರಾಗಿರುವ ರಾಘವೇಂದ್ರ ಅವರಿಗೆ ಈ ಸಮಿತಿಯಲ್ಲಿ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸುರಕ್ಷತಾ ಕ್ರಮಗಳನ್ನು ರೂಪಿಸಿ, ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ ಅವರಿಗೆ ಮಲೆನಾಡಿನ ಬಿಜೆಪಿ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.