ಸಂಭ್ರಮದಿಂದ ನಡೆದ ಬಿಜೆಪಿ ಸಾಹಿತ್ಯ ಸಮಾವೇಶ!
– ಮೈಸೂರು ಸಂಸದ ಯದುವೀರ್ ಭೇಟಿ: ಉದ್ಘಾಟನೆ
– ಸಾಹಿತಿಗಳು, ಬರಹಗಾರರ ಸಮಾಗಮ: ಗೌರವ
NAMMUR EXPRESS NEWS
ಉಡುಪಿ: ಕನ್ನಡ ಭಾಷೆಯ ಮೂಲಕ ರಾಜ್ಯದ ಒಗ್ಗೂಡುವಿಕೆಗಾಗಿ ಹೋರಾಟ ಮಾಡಿದ ಏಕೈಕ ಸಮುದಾಯ ಸಾಹಿತಿಗಳು, ಕಲಾವಿದರು ಹಾಗೂ ಕವಿಗಳು. ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಸಾಹಿತ್ಯ ಸಮ್ಮೇಳನ ಆಯೋಜನೆ ಅಭಿನಂದನಾರ್ಹ ಎಂದು ಮೈಸೂರು ಸಂಸದ ಯದುವೀರ್ ಒಡೆಯರ್ ಹೇಳಿದರು.
ಉಡುಪಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಕುಂಜಿಬೆಟ್ಟು ಶಾರದ ಮಂಟಪದಲ್ಲಿ ಜರುಗಿದ ಬಿಜೆಪಿ ಸಾಹಿತ್ಯ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮೈಸೂರು ಚಾಮುಂಡಿ ಬೆಟ್ಟ ಧಾರ್ಮಿಕ ಕ್ಷೇತ್ರ, ಅದು ಚಾಮುಂಡೇಶ್ವರಿ ತಾಯಿಯ ಆಸ್ತಿ. ನಾವು ಆ ತಾಯಿಯನ್ನು ಮಹಿಷಾಸುರಮರ್ದಿನಿ ಎಂದು ನಂಬುತ್ತೇವೆ. ಈ ಧಾರ್ಮಿಕ ಭಾವನೆಗೆ ಧಕ್ಕೆ ಆಗದಂತೆ ಮಹಿಷ ದಸರಾ ಆಚರಿಸಬಹುದು. ಆದರೆ ಚಾಮುಂಡಿಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ. ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಚಾಮುಂಡಿ ತಾಯಿ ದರ್ಶನಕ್ಕೂ ಯಾರಿಗೂ ಅವಕಾಶ ಇಲ್ಲ. ಹೀಗಾಗಿ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಚುನಾವಣೆಗೆ ಮೊದಲು ನನಗೆ ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ. ಮೈಸೂರು ರಾಜ ವಂಶಸ್ಥರು ಹಿಂದುಳಿದ ವರ್ಗಕ್ಕೆ ಸೇರಿದವರು ಎಂಬುದು ನನಗೆ ತಿಳಿದಿರಲಿಲ್ಲ. ಆದರೆ ಚುನಾವಣೆಯ ಸಂದರ್ಭದಲ್ಲಿ ನಾನು ಹಿಂದುಳಿದ ವರ್ಗಗಳ ಅಭ್ಯರ್ಥಿ ಎಂಬ ವಿಚಾರದಿಂದ ನನ್ನ ಜಾತಿ ಗೊತ್ತಾಯಿತು ಎಂದರು.
ಪ್ರತಿಯೊಬ್ಬ ಭಾರತೀಯ ಕನ್ನಡಿಗನ್ನಲ್ಲ ಆದರೆ ಪ್ರತಿಯೊಬ್ಬ ಕನ್ನಡಿಗ ಭಾರತೀಯ. ಈ ತತ್ವದೊಂದಿಗೆ ನಾವು ಮುಂದುವರಿಯಬೇಕಾಗಿದೆ. ತನ್ಮೂಲಕ ದೇಶದ ಸುಭದ್ರತೆಗಾಗಿ ಕಾರ್ಯನಿರ್ವಹಿಸೋಣ ಎಂದರು.
ಉಡುಪಿ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷರಾದ ಶ್ರೀ ವಿಜಯ್ ಕುಮಾರ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ, ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ, ಕುಂದಾಪುರ ಶಾಸಕರಾದ ಕಿರಣ್ ಕೊಡ್ಲಿ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಶ್ರೀ ವಿಠಲ ಪೂಜಾರಿ ಐರೋಡಿ, ಓಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ, ಬಿಜೆಪಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ಕಿಶೋರ್ ಕುಮಾರ್, ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾದ ಈಶ್ವರ್ ನಾಯಕ್, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಪರಿಶಿಷ್ಠ ಪಂಗಡ ಜಿಲ್ಲಾಧ್ಯಕ್ಷ ಕುಮಾರ್ದಾಸ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕಮಲಾಕ್ಷ ಹೆಬ್ಬಾರ್, ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ, ಪರಿಶಿಷ್ಟ ಪಂಗಡ ಮೊರ್ಚಾದ ಜಿಲ್ಲಾಧ್ಯಕ್ಷ ಚಂದ್ರ ಪಂಚವಟಿ, ಚಿಕ್ಕಮಗಳೂರು ಕ್ಷೇತ್ರದ ಮಹಾಂತೇಶ್, ಆರ್. ಸಿ. ನಾರಾಯಣ್,ಯುವಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್, ಉಡುಪಿ ಜಿಲ್ಲಾ ನಿಕಟಪೂರ್ವ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಾಹಿತಿಗಳು, ಬರಹಗಾರರ ಸಮಾಗಮ
ಕರಾವಳಿಯ ಸಾಹಿತಿಗಳು, ಕಲಾವಿದರು, ಲೇಖಕರು, ಕವಿಗಳು ಮತ್ತು ಚುಟುಕು ಬರಹಗಾರರ ಸಮ್ಮೇಳನದಲ್ಲಿ ನೂರಾರು ಮಂದಿ ಸಾಹಿತಿ,ಕಲಾವಿದರು ರಾಜ್ಯದ ವಿವಿಧ ಭಾಗದಿಂದ ಭಾಗವಹಿಸಿದ್ದರು. ಸಮ್ಮೇಳನದಲ್ಲಿ ಹಲವು ಮಂದಿ ಸಾಧಕರನ್ನು ಗೌರವಿಸಲಾಯಿತು.