ಹಸೆಮಣೆ ಏರಬೇಕಿದ್ದ ಯುವತಿ ಇಂದು ಹೃದಯಾಘಾತಕ್ಕೆ ಬಲಿ
* ಲೋ ಬ್ಲಡ್ ಪ್ರಷರ್ ಹಾಗೂ ಹೃದಯಾಘಾತದಿಂದ ಸಾವು ಶಂಕೆ
* ಶುಕ್ರವಾರ ನಡೆಯಬೇಕಿದ್ದ ಮದುವೆ,ವಿಧಿಯ ಕ್ರೂರ ಅಟ್ಟಹಾಸ
NAMMMUR EXPRESS NEWS
ಅಜ್ಜಂಪುರ: ವೈವಾಹಿಕ ಜೀವನಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದ ಯುವತಿಯೊಬ್ಬಳು ಅಕಾಲಿಕವಾಗಿ ಮರಣಹೊಂದಿದ ಹೃದಯವಿದ್ರಾವಕ ಘಟನೆ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಮದುವೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಸೊಲ್ಲಾಪುರ ಗ್ರಾಮದ ಶೃತಿ(24)ಅವರು ಅಕಸ್ಮಿಕವಾಗಿ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಶೃತಿ ಅವರಿಗೆ ಲೋ ಬ್ಲಡ್ ಪ್ರೆಶರ್ ಹಾಗೂ ಹೃದಯಾಘಾತ ಉಂಟಾಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
* ಶುಕ್ರವಾರ ನಡೆಯಬೇಕಿದ್ದ ಮದುವೆಗೆ,ವಿಧಿಯ ಕ್ರೂರ ಅಟ್ಟಹಾಸ
ಶೃತಿ ಅವರ ಮದುವೆ ತರೀಕೆರೆ ಪಟ್ಟಣದ ದಿಲೀಪ್ ಎಂಬ ಯುವಕನೊಂದಿಗೆ ನಾಳೆ (ಶುಕ್ರವಾರ) ನಡೆಯಬೇಕಿತ್ತು. ಮದುವೆ ಸಿದ್ಧತೆಗಳು ಜೋರಾಗಿ ನಡೆಯುತ್ತಿದ್ದಾಗಲೇ ಈ ದುರ್ಘಟನೆ ನಡೆದಿದ್ದು, ಮನೆಯವರಲ್ಲಿ ಹಾಗೂ ಸಂಬಂಧಿಕರ ವಲಯದಲ್ಲಿ ಆಘಾತದ ಅಲೆ ಹರಡಿದೆ.ಮದುವೆ ಸಂಭ್ರಮದ ಮನೆಯನ್ನು ಕ್ಷಣಾರ್ಧದಲ್ಲಿ ಸೂತಕದ ವಾತಾವರಣ ಆವರಿಸಿದ್ದು, ಕಣ್ಣೀರಿನಲ್ಲಿ ಶೃತಿ ಅವರ ಅಂತ್ಯ ಸಂಸ್ಕಾರಗಳು ನೆರವೇರಲಿದೆ.
ಘಟನೆಯ ಕುರಿತು ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗ್ರಾಮಸ್ಥರು ಹಾಗೂ ಬಂಧುಬಳಗದವರು ಈ ದುರ್ಘಟನೆಯಿಂದ ನೋವು ವ್ಯಕ್ತಪಡಿಸುತ್ತಿದ್ದು, “ಮದುವೆ ದಿನಕ್ಕೂ ಮುನ್ನವೇ ಇಂತಹ ದುರಂತ ಸಂಭವಿಸಿರುವುದು ವಿಧಿಯ ಕ್ರೂರ ಅಟ್ಟಹಾಸ ಎಂದು ಕಣ್ಣೀರಿಟ್ಟಿದ್ದಾರೆ.







