ಬಿಸಿಲು ನೋಡಿ ಜನರು ಕಂಗಾಲು!
– ಆ. 20ರಿಂದ ಮತ್ತೆ ಮಳೆ: ಮುಂಗಾರು ಚುರುಕು
– ಕರಾವಳಿಯಲ್ಲಿ ಆ.16ರಿಂದಲೇ ಮಳೆ
– ಎಲ್ಲೆಲ್ಲಿ ಮಳೆ: ಇಲ್ಲಿದೆ ಮಾಹಿತಿ
NAMMUR EXPRESS NEWS
ಬೆಂಗಳೂರು: ಈಗಿನ ಬಿಸಿಲು ನೋಡಿದರೆ ಇದು ಮಳೆಗಾಲವೋ ಅಥವಾ ಬೇಸಿಗೆ ಕಾಲವೋ ಎಂಬ ಗೊಂದಲ ಜನರಲ್ಲಿ ಮೂಡುತ್ತಿದೆ. ಒಂದು ಕಡೆ ಬಿಸಿಲಿನ ಹೊಡೆತಕ್ಕೆ ಸ್ವಲ್ಪ ನೀರು ಆಗಿದ್ದ ನದಿ ತೊರೆಗಳು ಬತ್ತಿ ಹೋಗಿವೆ. ಇದೀಗ ಮತ್ತೆ ಮುಂಗಾರು ಚುರುಕು ಆಗಲಿದೆ. 20ರಿಂದ ಮುಂಗಾರು ಚುರುಕಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ.
ಕರಾವಳಿಯಲ್ಲಿ 16ರಿಂದಲೇ ಚುರುಕು
ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆ ಹೆಚ್ಚಾಗಲಿದ್ದು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಆಗಸ್ಟ್ 20ರ ನಂತರ ಮಳೆಯಾಗಲಿದೆ. ಮುನಿರಾಬಾದ್, ಹೊಸಪೇಟೆ, ರಾಯಚೂರು, ಸಿಂಧನೂರಿನಲ್ಲಿ ಮಳೆಯಾಗಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ. ರಾಜ್ಯದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುತ್ತಿದ್ದರೂ ವಾಡಿಕೆ ಪ್ರಮಾಣದ ಮಳೆಯಾಗುತ್ತಿಲ್ಲ. ಕಳೆದ ನಾಲೈದು ವರ್ಷಗಳಿಂದ ಆಗಸ್ಟ್ ತಿಂಗಳಿನಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿತ್ತು. ಈ ವರ್ಷ ಮುಂಗಾರು ದುರ್ಬಲಗೊಂಡು ಮಳೆ ಕೊರತೆ ಎದುರಿಸುವಂತಾಗಿದೆ.